5:16 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು