2:19 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು