8:45 AM Thursday5 - June 2025
ಬ್ರೇಕಿಂಗ್ ನ್ಯೂಸ್
ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ…

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು