1:19 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು