1:28 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸ್ವ ಕ್ಷೇತ್ರದ ಕಾರ್ಯಕ್ರಮ: ಶಾಸಕ ಕುಮಠಳ್ಳಿ ಗೈರು; ಮಾಜಿ ಡಿಸಿಎಂ ಸವದಿ ಹಾಜರು

14/11/2022, 21:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಮತಕ್ಷೇತ್ರದಲ್ಲಿ ಏನೇ ಸರ್ಕಾರಿ ಕೆಲಸಗಳು, ಗುದ್ದಲಿ ಪೂಜೆ, ಸಭೆ ನಡೆದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಂತೂ ಇದ್ದೇ ಇರತ್ತಾರೆ. ಆದರೆ ಕ್ಷೇತ್ರದ ಪ್ರತಿನಿಧಿಯಾದ ಶಾಸಕ ಮಹೇಶ ಕುಮಠಳ್ಳಿ ಅವರು ಅವರದೇ ಪಕ್ಷದ ಸಚಿವರುಗಳು ಬಂದರೂ ಅಂತರ ಕಾಯ್ದುಕೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳಗಳ ಹಿಂದೆ 9 ಕೆರೆ ತುಂಬುವ ಯೋಜನೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ. ಸಿ. ಮಾಧುಸ್ವಾಮಿ ಹಾಗೂ ಅಥಣಿ ತಾಲೂಕಿನ‌ ಕೊಟ್ಟಲಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಅವರು ಸುಮಾರು 35 ಕೋಟಿ ರೂ ವೆಚ್ಚದ ಕೊಟ್ಟಲಗಿ – ನಿಪ್ಪಾಣಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಆಗಲೂ ಕೂಡಾ ಕುಮಠಳ್ಳಿ ಗೈರಾಗಿದ್ದರು. ನಿನ್ನೆ (ರವಿವಾರ) ಅಥಣಿ ಹೊರವಲಯದಲ್ಲಿರುವ ಹಳ್ಯಾಳ ರೈತ ಸಭಾ ಭವನದಲ್ಲಿ ತಳವಾರ ಸಮುದಾಯದಿಂದ ಅಭಿನಂದನೆ ಸಮಾವೇಶಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಗೈರಾಗಿದ್ದಾರೆ.


ಕಳೆದ ಮೂರು ಕಾರ್ಯಕ್ರಮಕ್ಕೆ ಸಚಿವರು ಸ್ವ ಕ್ಷೇತ್ರಕ್ಕೂ ಬಂದರೂ ಶಾಸಕ ಮಹೇಶ ಕುಮಠಳ್ಳಿ ಗೈರಾಗಿದ್ದಾರೆ. ಯಾವುದೇ ಸಚಿವರು ಕ್ಷೇತ್ರಕ್ಕೆ ಬಂದಾಗ ಅವರನ್ನ ಅಹ್ವಾನ ಮಾಡಬೇಕಾದದ್ದು ಆ ಕ್ಷೇತ್ರದ ಶಾಸಕರು. ಆದರೆ, ಪ್ರತಿಸಲ ಸಚಿವರು ಬಂದಾಗ ಆಹ್ವಾನ ಮಾಡೊದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಒಂದೆರಡ ಸಲ ಯಾವುದೇ ಕಾರ್ಯಕ್ರಮಕ್ಕೆ ಹೋದರು ಮೂರನೇ ಸಲಕ್ಕಾದರೂ ಶಾಸಕ ಮಹೇಶ ಕುಮಠಳ್ಳಿ ಸಚಿವರ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಿತ್ತು ಅಂತ ಅಥಣಿ ಮತಕ್ಷೇತ್ರದ ಜನ ಮಾತನಾಡಿಕೊಳ್ಳುತ್ತುದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು