1:27 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸ್ವ ಕ್ಷೇತ್ರದ ಕಾರ್ಯಕ್ರಮ: ಶಾಸಕ ಕುಮಠಳ್ಳಿ ಗೈರು; ಮಾಜಿ ಡಿಸಿಎಂ ಸವದಿ ಹಾಜರು

14/11/2022, 21:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಮತಕ್ಷೇತ್ರದಲ್ಲಿ ಏನೇ ಸರ್ಕಾರಿ ಕೆಲಸಗಳು, ಗುದ್ದಲಿ ಪೂಜೆ, ಸಭೆ ನಡೆದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಂತೂ ಇದ್ದೇ ಇರತ್ತಾರೆ. ಆದರೆ ಕ್ಷೇತ್ರದ ಪ್ರತಿನಿಧಿಯಾದ ಶಾಸಕ ಮಹೇಶ ಕುಮಠಳ್ಳಿ ಅವರು ಅವರದೇ ಪಕ್ಷದ ಸಚಿವರುಗಳು ಬಂದರೂ ಅಂತರ ಕಾಯ್ದುಕೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳಗಳ ಹಿಂದೆ 9 ಕೆರೆ ತುಂಬುವ ಯೋಜನೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ. ಸಿ. ಮಾಧುಸ್ವಾಮಿ ಹಾಗೂ ಅಥಣಿ ತಾಲೂಕಿನ‌ ಕೊಟ್ಟಲಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಅವರು ಸುಮಾರು 35 ಕೋಟಿ ರೂ ವೆಚ್ಚದ ಕೊಟ್ಟಲಗಿ – ನಿಪ್ಪಾಣಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಆಗಲೂ ಕೂಡಾ ಕುಮಠಳ್ಳಿ ಗೈರಾಗಿದ್ದರು. ನಿನ್ನೆ (ರವಿವಾರ) ಅಥಣಿ ಹೊರವಲಯದಲ್ಲಿರುವ ಹಳ್ಯಾಳ ರೈತ ಸಭಾ ಭವನದಲ್ಲಿ ತಳವಾರ ಸಮುದಾಯದಿಂದ ಅಭಿನಂದನೆ ಸಮಾವೇಶಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಗೈರಾಗಿದ್ದಾರೆ.


ಕಳೆದ ಮೂರು ಕಾರ್ಯಕ್ರಮಕ್ಕೆ ಸಚಿವರು ಸ್ವ ಕ್ಷೇತ್ರಕ್ಕೂ ಬಂದರೂ ಶಾಸಕ ಮಹೇಶ ಕುಮಠಳ್ಳಿ ಗೈರಾಗಿದ್ದಾರೆ. ಯಾವುದೇ ಸಚಿವರು ಕ್ಷೇತ್ರಕ್ಕೆ ಬಂದಾಗ ಅವರನ್ನ ಅಹ್ವಾನ ಮಾಡಬೇಕಾದದ್ದು ಆ ಕ್ಷೇತ್ರದ ಶಾಸಕರು. ಆದರೆ, ಪ್ರತಿಸಲ ಸಚಿವರು ಬಂದಾಗ ಆಹ್ವಾನ ಮಾಡೊದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಒಂದೆರಡ ಸಲ ಯಾವುದೇ ಕಾರ್ಯಕ್ರಮಕ್ಕೆ ಹೋದರು ಮೂರನೇ ಸಲಕ್ಕಾದರೂ ಶಾಸಕ ಮಹೇಶ ಕುಮಠಳ್ಳಿ ಸಚಿವರ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಿತ್ತು ಅಂತ ಅಥಣಿ ಮತಕ್ಷೇತ್ರದ ಜನ ಮಾತನಾಡಿಕೊಳ್ಳುತ್ತುದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು