3:55 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು !

03/08/2021, 16:28

ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಕೊರೊನಾ ಹಿನ್ನೆಲೆಯಲ್ಲಿ 2020ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗಿತ್ತು. ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಸಭೆ-ಸಮಾರಂಭಗಳಿಗೆ ಅವಕಾಶ ಇರಲಿಲ್ಲ. ಜನರು ಮನೆ ಬಿಟ್ಟು ಹೊರಗೆ ಬರಬಾರದು ಎಂದು ಕರ್ಫ್ಯೂ ಹೇರಲಾಗಿತ್ತು. ಆದರೆ  ಕರಾವಳಿಯ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡಮಿಯ ಅಧ್ಯಕ್ಷರು ಈ ಅವಧಿಯ ಪ್ರಯಾಣ ಭತ್ತೆ ಸ್ವೀಕರಿಸಿರುವ ಅಂಶವನ್ನು ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ, ಸಾಹಿತಿ ಡಾ.ಅರವಿಂದ ಚಂದ್ರಕಾಂತ ಶ್ಯಾನಭಾಗ ಮಾಹಿತಿ ಹಕ್ಕು ಕಾಯ್ದೆಯಡಿ ಬೆಳಕಿಗೆ ತಂದಿದ್ದಾರೆ.

ಲಾಕ್‌ಡೌನ್, ಕರ್ಫ್ಯೂ ಸಂದರ್ಭದಲ್ಲಿ ಅಕಾಡಮಿಗಳಿಗೆ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಬಿಡಿ, ಅಕಾಡೆಮಿಗಳ

ಕಚೇರಿ ತೆರೆಯಲು ಕೂಡ ಅವಕಾಶ ಇರಲಿಲ್ಲ. ವಾಹನಗಳ ಓಡಾಟಕ್ಕೂ ನಿರ್ಬಂಧ ಇತ್ತು. ಆದರೆ ನಮ್ಮ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡೆಮಿಗಳ ಅಧ್ಯಕ್ಷರು ಫುಲ್ ಬ್ಯುಸಿಯಾಗಿದ್ದರು. ಆದರೆ ಇವರು ಬ್ಯುಸಿ ಇದ್ದದ್ದು ತಮ್ಮ ತಮ್ಮ ಅಕಾಡೆಮಿಗಳ ಅಭಿವೃದ್ಧಿ ವಿಷಯದಲ್ಲಿ ಅಲ್ಲ. ಬದಲಿಗೆ ಮನೆಯಲ್ಲೇ ಕುಳಿತು ಪ್ರಯಾಣ ಭತ್ತೆಯನ್ನು ಪಡೆಯುವುದು ಹೇಗೆ ಎನ್ನುವ ಕುರಿತು ಬ್ಯುಸಿಯಾಗಿದ್ದರು. ಈ ಮೂರು ಅಕಾಡೆಮಿಗಳ ಅಧ್ಯಕ್ಷರು ಮನೆಯಲ್ಲೇ ಕೂತು ಸಾಹಿತ್ಯಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಷಗಟ್ಟಲೆ ಮೊತ್ತದ ಪ್ರಯಾಣ ಭತ್ತೆಯನ್ನು ಪಡೆದಿದ್ದಾರೆ. ಅರ್ಥಾತ್ ಜನರ ತೆರಿಗೆಯ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದರ ಕುರಿತು ಡಾ. ಶ್ಯಾನಬೊಗ ಅವರು ದಾಖಲೆ ಸಮೇತ ಮಾಹಿತಿ ಹೊರಗೆಡಹಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಹೆಚ್ಚಾಗಿ ವೆಬಿನಾರ್, ಫೇಸ್‌ಬುಕ್ ಲೈವ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ ಸಂವಾದಗಳು ನಡೆಸಲಾಗಿದೆ. ಹೀಗಿರುವಾಗ ಈ ಅಕಾಡಮಿಗಳ ಅಧ್ಯಕ್ಷರು ಎಲ್ಲೂ ಪ್ರಯಾಣಿಸದೆ ತಿಂಗಳಿಗೆ ಬರೋಬ್ಬರಿ 30 ಸಾವಿರ ರೂ.ಗಳಂತೆ ಎರಡೂವರೆ ತಿಂಗಳಿಗೆ 75 ಸಾವಿರ ರೂ. ವೆಚ್ಚವನ್ನು ತೋರಿಸಿ ವಿವಿಧ ಟ್ರಾವೆಲ್ಸ್ ಸಂಸ್ಥೆಗಳ ಹೆಸರಿನಲ್ಲಿ ಪ್ರಯಾಣ ಭತ್ತೆಯನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಡಾ. ಶ್ಯಾನಭಾಗ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಸಿಗಬೇಕಾದರೆ ನಮ್ಮ ಪ್ರಧಾನ ಮಂತ್ರಿಯವರು ಮಾತ್ರ ಪ್ರಾಮಾಣಿಕರಾದ್ರೆ ಸಾಲದು. ನಮ್ಮ ಎಂಪಿ, ಎಂಎಲ್ ಎ, ಕಾರ್ಪೊರೇಟರ್ ಗಳು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಸರಕಾರಿ ಅಧಿಕಾರಿಗಳು ಕೂಡ ಪ್ರಾಮಾಣಿಕರಾಗಿರಬೇಕು. ಪರ್ಸಂಟೆಜ್ ಕಾಮಗಾರಿ ಮೂಲಕ ದೇಶದ ಅಭಿವೃದ್ಧಿ ಮಾಡಬಾರದು.

ಇತ್ತೀಚಿನ ಸುದ್ದಿ

ಜಾಹೀರಾತು