11:40 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು !

03/08/2021, 16:28

ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಕೊರೊನಾ ಹಿನ್ನೆಲೆಯಲ್ಲಿ 2020ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗಿತ್ತು. ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಸಭೆ-ಸಮಾರಂಭಗಳಿಗೆ ಅವಕಾಶ ಇರಲಿಲ್ಲ. ಜನರು ಮನೆ ಬಿಟ್ಟು ಹೊರಗೆ ಬರಬಾರದು ಎಂದು ಕರ್ಫ್ಯೂ ಹೇರಲಾಗಿತ್ತು. ಆದರೆ  ಕರಾವಳಿಯ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡಮಿಯ ಅಧ್ಯಕ್ಷರು ಈ ಅವಧಿಯ ಪ್ರಯಾಣ ಭತ್ತೆ ಸ್ವೀಕರಿಸಿರುವ ಅಂಶವನ್ನು ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ, ಸಾಹಿತಿ ಡಾ.ಅರವಿಂದ ಚಂದ್ರಕಾಂತ ಶ್ಯಾನಭಾಗ ಮಾಹಿತಿ ಹಕ್ಕು ಕಾಯ್ದೆಯಡಿ ಬೆಳಕಿಗೆ ತಂದಿದ್ದಾರೆ.

ಲಾಕ್‌ಡೌನ್, ಕರ್ಫ್ಯೂ ಸಂದರ್ಭದಲ್ಲಿ ಅಕಾಡಮಿಗಳಿಗೆ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಬಿಡಿ, ಅಕಾಡೆಮಿಗಳ

ಕಚೇರಿ ತೆರೆಯಲು ಕೂಡ ಅವಕಾಶ ಇರಲಿಲ್ಲ. ವಾಹನಗಳ ಓಡಾಟಕ್ಕೂ ನಿರ್ಬಂಧ ಇತ್ತು. ಆದರೆ ನಮ್ಮ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡೆಮಿಗಳ ಅಧ್ಯಕ್ಷರು ಫುಲ್ ಬ್ಯುಸಿಯಾಗಿದ್ದರು. ಆದರೆ ಇವರು ಬ್ಯುಸಿ ಇದ್ದದ್ದು ತಮ್ಮ ತಮ್ಮ ಅಕಾಡೆಮಿಗಳ ಅಭಿವೃದ್ಧಿ ವಿಷಯದಲ್ಲಿ ಅಲ್ಲ. ಬದಲಿಗೆ ಮನೆಯಲ್ಲೇ ಕುಳಿತು ಪ್ರಯಾಣ ಭತ್ತೆಯನ್ನು ಪಡೆಯುವುದು ಹೇಗೆ ಎನ್ನುವ ಕುರಿತು ಬ್ಯುಸಿಯಾಗಿದ್ದರು. ಈ ಮೂರು ಅಕಾಡೆಮಿಗಳ ಅಧ್ಯಕ್ಷರು ಮನೆಯಲ್ಲೇ ಕೂತು ಸಾಹಿತ್ಯಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಷಗಟ್ಟಲೆ ಮೊತ್ತದ ಪ್ರಯಾಣ ಭತ್ತೆಯನ್ನು ಪಡೆದಿದ್ದಾರೆ. ಅರ್ಥಾತ್ ಜನರ ತೆರಿಗೆಯ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದರ ಕುರಿತು ಡಾ. ಶ್ಯಾನಬೊಗ ಅವರು ದಾಖಲೆ ಸಮೇತ ಮಾಹಿತಿ ಹೊರಗೆಡಹಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಹೆಚ್ಚಾಗಿ ವೆಬಿನಾರ್, ಫೇಸ್‌ಬುಕ್ ಲೈವ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ ಸಂವಾದಗಳು ನಡೆಸಲಾಗಿದೆ. ಹೀಗಿರುವಾಗ ಈ ಅಕಾಡಮಿಗಳ ಅಧ್ಯಕ್ಷರು ಎಲ್ಲೂ ಪ್ರಯಾಣಿಸದೆ ತಿಂಗಳಿಗೆ ಬರೋಬ್ಬರಿ 30 ಸಾವಿರ ರೂ.ಗಳಂತೆ ಎರಡೂವರೆ ತಿಂಗಳಿಗೆ 75 ಸಾವಿರ ರೂ. ವೆಚ್ಚವನ್ನು ತೋರಿಸಿ ವಿವಿಧ ಟ್ರಾವೆಲ್ಸ್ ಸಂಸ್ಥೆಗಳ ಹೆಸರಿನಲ್ಲಿ ಪ್ರಯಾಣ ಭತ್ತೆಯನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಡಾ. ಶ್ಯಾನಭಾಗ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಸಿಗಬೇಕಾದರೆ ನಮ್ಮ ಪ್ರಧಾನ ಮಂತ್ರಿಯವರು ಮಾತ್ರ ಪ್ರಾಮಾಣಿಕರಾದ್ರೆ ಸಾಲದು. ನಮ್ಮ ಎಂಪಿ, ಎಂಎಲ್ ಎ, ಕಾರ್ಪೊರೇಟರ್ ಗಳು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಸರಕಾರಿ ಅಧಿಕಾರಿಗಳು ಕೂಡ ಪ್ರಾಮಾಣಿಕರಾಗಿರಬೇಕು. ಪರ್ಸಂಟೆಜ್ ಕಾಮಗಾರಿ ಮೂಲಕ ದೇಶದ ಅಭಿವೃದ್ಧಿ ಮಾಡಬಾರದು.

ಇತ್ತೀಚಿನ ಸುದ್ದಿ

ಜಾಹೀರಾತು