2:39 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸ್ವಾಮಿ, ಇದು ಕಾರು ರೇಸ್ ಅಲ್ಲ, ವಿರಾಜಪೇಟೆ ಬಳಿ ನಡೆದ ಲೈವ್ ಆಕ್ಸಿಡೆಂಟ್; ಓವರ್ ಸ್ಪೀಡಿಗೆ 4 ವಾಹನಗಳು ಅಪಘಾತ!

30/06/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಒಂದು ಇನ್ನೋವಾ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಕಾಫಿ ತೋಟದಲ್ಲಿ ಪಲ್ಟಿ, ಈ ಅವಘದ ಸಂಭವಿಸಿ ಸ್ವಲ್ಪ ಹೊತ್ತಿನಲ್ಲೇ ಅದೇ ತಿರುವುನಲ್ಲಿ ಮೂರು ಕಾರುಗಳು ಒಂದರ ಹಿಂದೆ ಒಂದು ವೇಗವಾಗಿ ಬಂದು ಡಿಕ್ಕಿ. ಹೌದು ಇದು ಯಾವುದೇ ಕಾರ್ ರೇಸ್ ನ ಚಿತ್ರಣವಲ್ಲ ಬದಲಾಗಿ ಕೇರಳಿಗರ ಓವರ್ ಸ್ಪೀಡ್ ಚಾಲನೆಯಿಂದ ಕಂಡು ಬಂದ ಬೆಚ್ಚಿ ಬೀಳಿಸುವ ಅಪಘಾತ ದ ದೃಶ್ಯ..!!!



ವಿರಾಜಪೇಟೆಯ ಆರ್ಜಿ ಗ್ರಾಮದ ಪೆರಂಬಾಡಿ ಕೊರಗಜ್ಜ ದೇವಾಲಯದ ಸಮೀಪ ಕಳೆದ ರಾತ್ರಿ ಇಲ್ಲಿನ ತಿರುವಿನಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಕೇರಳ ನೊಂದಣಿ ಹೊಂದಿದ ವಾಹನಗಳು ವೇಗವಾಗಿ ಇಲ್ಲಿ ಚಲಿಸುವುದರಿಂದ, ಹಾಗೂ ವಾಹನಗಳಿಗೆ ಅಳವಡಿಸಲಾಗಿರುವ ಹೈ ಭೀಮ್ ಲೈಟ್ಗಳಿಂದ ಹಿಂಭಾಗದಲ್ಲಿ ಬರುವ ವಾಹನಗಳಿಗೆ ಮುಂದೆ ರಸ್ತೆ ಕಾಣದೆ ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಬಹಳಷ್ಟು ಅಪಘಾತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.ಸದ್ಯ ನಾಲ್ಕು ಕಾರುಗಳಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು