6:36 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿ: ಶಾಸಕ ಗೋಪಾಲಯ್ಯ

12/01/2026, 17:43

ಬೆಂಗಳೂರು(reporterkarnataka.com): ಮಹಾನ್ ಸಂತ, ತತ್ವಜ್ಞಾನಿ ಹಾಗೂ ಯುವಶಕ್ತಿಯ ಪ್ರೇರಣಾಸ್ರೋತರಾದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸುತ್ತಿದ್ದೇವೆ. ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿತ್ವ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠದ
ಸ್ವಾಮಿ ವಿವೇಕಾನಂದ ಆಟದ ಮೈದಾನ ಸೋಮವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 163ನೇ ಜಯತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎದ್ದೇಳಿ, ಗುರಿ ತಲುಪುವ ತನಕ ನಿಲ್ಲಬೇಡಿ ಎಂಬ ಅವರ ವಾಣಿ ಪ್ರತಿಯೊಬ್ಬ ಯುವಕರಿಗೂ ಮಾರ್ಗದರ್ಶಕವಾಗಿದೆ. ಶಿಕ್ಷಣವು ಕೇವಲ ಉದ್ಯೋಗಕ್ಕಾಗಿ ಅಲ್ಲ, ವ್ಯಕ್ತಿತ್ವ ನಿರ್ಮಾಣಕ್ಕಾಗಿ ಇರಬೇಕು. ಆತ್ಮವಿಶ್ವಾಸ, ಶಿಸ್ತು, ಸೇವಾಭಾವನೆ ಮತ್ತು ದೇಶಪ್ರೇಮವೇ ನಿಜವಾದ ಶಿಕ್ಷಣದ ಫಲ ಎಂದು ಅವರು ನಂಬಿದ್ದರು ಎಂದರು.
1893ರಲ್ಲಿ ಚಿಕಾಗೋ ಧರ್ಮಸಮ್ಮೇಳನದಲ್ಲಿ ನೀಡಿದ ಅವರ ಭಾಷಣವು ಭಾರತದ ಗೌರವವನ್ನು ಜಗತ್ತಿನಾದ್ಯಂತ ಹೆಚ್ಚಿಸಿತು. ಭಾರತೀಯ ಸಂಸ್ಕೃತಿ, ಸಹಿಷ್ಣುತೆ ಮತ್ತು ಮಾನವೀಯತೆಯ ಸಂದೇಶವನ್ನು ಅವರು ವಿಶ್ವಕ್ಕೆ ಸಾರಿದ್ದಾರೆ. ವಿವೇಕಾನಂದ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಶ್ರಮ, ಪ್ರಾಮಾಣಿಕತೆ ಮತ್ತು ಸೇವಾಭಾವನೆಯೊಂದಿಗೆ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು. ಸ್ವಾಮಿ ವಿವೇಕಾನಂದರ ಚಿಂತನೆಗಳು ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆಯಾಗಲಿ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಹರೀಶ್, ಮಂಡಲದ ಅಧ್ಯಕ್ಷ ಡಾ. ನಾಗೇಂದ್ರ, ರಾಘವೇಂದ್ರ ಶೆಟ್ಟಿ,ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಮಂಜುನಾಥ್ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅವಿನ್ ಆರಾಧ್ಯ, ನಿಸರ್ಗ ಜಗದೀಶ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು