5:34 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಧರ್ಮ ಚಾವಡಿ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ? ವ್ಯಾವಹಾರಿಕವಾಗಿ ಅವರು ಜಿಗುಪ್ಸೆಗೊಂಡಿದ್ದರೇ?

22/07/2022, 22:01

ಮಂಗಳೂರು(reporterkarnataka.com):

ಕಂದಾವರ ಪಂಚಾಯಿತಿಯ ಕೊಳಂಬೆ ಗ್ರಾಮದ ತಲಕಲ ಶೆಟ್ಟಿಪಾಲ್ ನ ‘ಧರ್ಮ ಚಾವಡಿ’ ಮಠದ ಶ್ರೀ ಕೃಷ್ಣ ದೇವಿ ಪ್ರಸಾದ ಸ್ವಾಮೀಜಿ (50) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆಯಲಾರಂಭಿಸಿದೆ. ವ್ಯಾವಹಾರಿಕವಾಗಿ ಜಿಗುಪ್ಸೆಗೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸ್ವಾಮೀಜಿ ಶುಕ್ರವಾರ ಮುಂಜಾನೆ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು

ಸುಮಾರು 5 ವರ್ಷದ ಹಿಂದೆ ಸಾಂಸರಿಕ ಜೀವನವನ್ನು ತ್ಯಜಿಸಿದ ಅವರು ಸನ್ಯಾಸಿ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ ಅವರು ತಲಕಲದಲ್ಲಿನ ತಮ್ಮ ವಿಶಾಲವಾದ ಜಾಗದಲ್ಲಿ ಧರ್ಮ ಚಾವಡಿ ಸ್ಥಾಪಿಸಿ, ಮಠದಲ್ಲೇ ವಾಸಿಸುತ್ತಿದ್ದರು.

ಶುಕ್ರವಾರ ಮುಂಜಾನೆ ದೇವರಿಗೆ ಪೂಜೆ ಮಾಡಿದ ಬಳಿಕ ಸ್ವಾಮೀಜಿಯವರು ಕೋಣೆಯೊಳಗಡೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಳೆದ ವರ್ಷ ಧರ್ಮ ಚಾವಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಅದ್ದೂರಿಯ ಪೂಜಾ ಕಾರ್ಯ

ನಡೆಸಿದ್ದರು. ಮಠಕ್ಕೆ ಬರುವ ಭಕ್ತರಿಗೆ ಭವಿಷ್ಯ 

ಕೂಡ ಹೇಳುತ್ತಿದ್ದರು. ಇದರಿಂದ ಅವರು ಸಾಕಷ್ಟು

ಜನಪ್ರಿಯರಾಗಿದ್ದರು. ಧರ್ಮ ಚಾವಡಿಯ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಇದೆ ಎನ್ನಲಾಗಿದೆ. ವ್ಯವಹಾರಿಕವಾಗಿ ಜುಗುಪ್ಸೆ ಗೊಂಡು ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸ್ವಾಮೀಜಿ ಆತ್ಮಹತ್ಯೆ ಬಗ್ಗೆ ಅವರ ಪೂರ್ವಾಶ್ರಮದ

ಪತ್ನಿ ಪ್ರಭಾ ಶೆಟ್ಟಿ ಬಜಪೆ ಪೋಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು