2:23 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಧರ್ಮ ಚಾವಡಿ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ? ವ್ಯಾವಹಾರಿಕವಾಗಿ ಅವರು ಜಿಗುಪ್ಸೆಗೊಂಡಿದ್ದರೇ?

22/07/2022, 22:01

ಮಂಗಳೂರು(reporterkarnataka.com):

ಕಂದಾವರ ಪಂಚಾಯಿತಿಯ ಕೊಳಂಬೆ ಗ್ರಾಮದ ತಲಕಲ ಶೆಟ್ಟಿಪಾಲ್ ನ ‘ಧರ್ಮ ಚಾವಡಿ’ ಮಠದ ಶ್ರೀ ಕೃಷ್ಣ ದೇವಿ ಪ್ರಸಾದ ಸ್ವಾಮೀಜಿ (50) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆಯಲಾರಂಭಿಸಿದೆ. ವ್ಯಾವಹಾರಿಕವಾಗಿ ಜಿಗುಪ್ಸೆಗೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸ್ವಾಮೀಜಿ ಶುಕ್ರವಾರ ಮುಂಜಾನೆ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು

ಸುಮಾರು 5 ವರ್ಷದ ಹಿಂದೆ ಸಾಂಸರಿಕ ಜೀವನವನ್ನು ತ್ಯಜಿಸಿದ ಅವರು ಸನ್ಯಾಸಿ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ ಅವರು ತಲಕಲದಲ್ಲಿನ ತಮ್ಮ ವಿಶಾಲವಾದ ಜಾಗದಲ್ಲಿ ಧರ್ಮ ಚಾವಡಿ ಸ್ಥಾಪಿಸಿ, ಮಠದಲ್ಲೇ ವಾಸಿಸುತ್ತಿದ್ದರು.

ಶುಕ್ರವಾರ ಮುಂಜಾನೆ ದೇವರಿಗೆ ಪೂಜೆ ಮಾಡಿದ ಬಳಿಕ ಸ್ವಾಮೀಜಿಯವರು ಕೋಣೆಯೊಳಗಡೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಳೆದ ವರ್ಷ ಧರ್ಮ ಚಾವಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಅದ್ದೂರಿಯ ಪೂಜಾ ಕಾರ್ಯ

ನಡೆಸಿದ್ದರು. ಮಠಕ್ಕೆ ಬರುವ ಭಕ್ತರಿಗೆ ಭವಿಷ್ಯ 

ಕೂಡ ಹೇಳುತ್ತಿದ್ದರು. ಇದರಿಂದ ಅವರು ಸಾಕಷ್ಟು

ಜನಪ್ರಿಯರಾಗಿದ್ದರು. ಧರ್ಮ ಚಾವಡಿಯ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಇದೆ ಎನ್ನಲಾಗಿದೆ. ವ್ಯವಹಾರಿಕವಾಗಿ ಜುಗುಪ್ಸೆ ಗೊಂಡು ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸ್ವಾಮೀಜಿ ಆತ್ಮಹತ್ಯೆ ಬಗ್ಗೆ ಅವರ ಪೂರ್ವಾಶ್ರಮದ

ಪತ್ನಿ ಪ್ರಭಾ ಶೆಟ್ಟಿ ಬಜಪೆ ಪೋಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು