9:39 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಧರ್ಮ ಚಾವಡಿ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ? ವ್ಯಾವಹಾರಿಕವಾಗಿ ಅವರು ಜಿಗುಪ್ಸೆಗೊಂಡಿದ್ದರೇ?

22/07/2022, 22:01

ಮಂಗಳೂರು(reporterkarnataka.com):

ಕಂದಾವರ ಪಂಚಾಯಿತಿಯ ಕೊಳಂಬೆ ಗ್ರಾಮದ ತಲಕಲ ಶೆಟ್ಟಿಪಾಲ್ ನ ‘ಧರ್ಮ ಚಾವಡಿ’ ಮಠದ ಶ್ರೀ ಕೃಷ್ಣ ದೇವಿ ಪ್ರಸಾದ ಸ್ವಾಮೀಜಿ (50) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆಯಲಾರಂಭಿಸಿದೆ. ವ್ಯಾವಹಾರಿಕವಾಗಿ ಜಿಗುಪ್ಸೆಗೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸ್ವಾಮೀಜಿ ಶುಕ್ರವಾರ ಮುಂಜಾನೆ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು

ಸುಮಾರು 5 ವರ್ಷದ ಹಿಂದೆ ಸಾಂಸರಿಕ ಜೀವನವನ್ನು ತ್ಯಜಿಸಿದ ಅವರು ಸನ್ಯಾಸಿ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ ಅವರು ತಲಕಲದಲ್ಲಿನ ತಮ್ಮ ವಿಶಾಲವಾದ ಜಾಗದಲ್ಲಿ ಧರ್ಮ ಚಾವಡಿ ಸ್ಥಾಪಿಸಿ, ಮಠದಲ್ಲೇ ವಾಸಿಸುತ್ತಿದ್ದರು.

ಶುಕ್ರವಾರ ಮುಂಜಾನೆ ದೇವರಿಗೆ ಪೂಜೆ ಮಾಡಿದ ಬಳಿಕ ಸ್ವಾಮೀಜಿಯವರು ಕೋಣೆಯೊಳಗಡೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಳೆದ ವರ್ಷ ಧರ್ಮ ಚಾವಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಅದ್ದೂರಿಯ ಪೂಜಾ ಕಾರ್ಯ

ನಡೆಸಿದ್ದರು. ಮಠಕ್ಕೆ ಬರುವ ಭಕ್ತರಿಗೆ ಭವಿಷ್ಯ 

ಕೂಡ ಹೇಳುತ್ತಿದ್ದರು. ಇದರಿಂದ ಅವರು ಸಾಕಷ್ಟು

ಜನಪ್ರಿಯರಾಗಿದ್ದರು. ಧರ್ಮ ಚಾವಡಿಯ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಇದೆ ಎನ್ನಲಾಗಿದೆ. ವ್ಯವಹಾರಿಕವಾಗಿ ಜುಗುಪ್ಸೆ ಗೊಂಡು ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸ್ವಾಮೀಜಿ ಆತ್ಮಹತ್ಯೆ ಬಗ್ಗೆ ಅವರ ಪೂರ್ವಾಶ್ರಮದ

ಪತ್ನಿ ಪ್ರಭಾ ಶೆಟ್ಟಿ ಬಜಪೆ ಪೋಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು