1:23 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್ ಆರ್. ಪೂಜಾರಿ

06/07/2024, 22:48

ಮಂಗಳೂರು(reporterkarnataka.com): ಸ್ವಾಮೀಜಿಗಳು ಹಿಂದೂ ಸಮಾಜದಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಗಮನ ಹರಿಸಲಿ. ಅದು ಬಿಟ್ಟು
ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಉಡುಪಿಯ ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಪ್ರತಿಕ್ರಿಯಿಸಿರುವ ಬಗ್ಗೆ ತಿರುಗೇಟು ನೀಡಿದರು.
ಧಾರ್ಮಿಕ ಕ್ಷೇತ್ರದಲ್ಲಿರುವ ಸ್ವಾಮೀಜಿಗಳು ರಾಜಕೀಯ ಮಾತನಾಡುವುದನ್ನು ಕಾಂಗ್ರೆಸ್ ಖಂಡಿಸುತ್ತದೆ. ನಾವು ಎಂದಿಗೂ ಹಿಂದೂ ಸಮಾಜವನ್ನು ಬಿಟ್ಟುಕೊಟ್ಟಿಲ್ಲ. ನನಗೂ ಈ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಹಿಂದೂಗಳು ಮತ ಹಾಕಿದ್ದಾರೆ. ನಾವುಗಳು ಕೂಡ ಹಿಂದೂಗಳು. ಪೇಜಾವರ ಶ್ರೀಗಳು ತಮ್ಮ ವ್ಯಾಪ್ತಿಯನ್ನು ಅರಿತು ಅದರ ಕಡೆಗೆ ಗಮನ ಹರಿಸಿದರೆ ಉತ್ತಮ ಎಂದು ಹೇಳಿದರು.
ಆಸೆ-ಆಮೀಷಗಳನ್ನು ತೋರಿಸಿ ಜನರಿಂದ ಮತ ಪಡೆದಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಮ ಮಂದಿರ ಪೂರ್ಣಗೊಳ್ಳುವ ಮೊದಲೇ ಜನರಲ್ಲಿ ದೇವರ ಹೆಸರನ್ನು ಹೇಳಿ ತರಾತುರಿಯಲ್ಲಿ ಮಂದಿರವನ್ನು ಉದ್ಘಾಟಿಸಿ ಜನರಲ್ಲಿ ಆಸೆ-ಆಮೀಷವನ್ನು ತೋರಿಸಿದವರು ಯಾರು? ಇದು ರಾಜಕೀಯವಲ್ಲವೇ? ಇದರಲ್ಲಿ ರಾಜಕೀಯ ಮಾಡಿದವರು ಯಾರು? ಎಂದು ಪ್ರಶ್ನಿಸಿದರು.
ದೇಶದಲ್ಲಿ ನಡೆಯುತ್ತಿರುವ ತಾರತಮ್ಯದ ಬಗ್ಗೆ, ನೀಟ್ ಪರೀಕ್ಷೆಯ ಸೋರಿಕೆಯಿಂದಾಗಿ ಬಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುವುದಿಲ್ಲ. ಇವರಿಗೆ ಬಡವರ ಕಾಳಜಿ ಇಲ್ಲ. ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಮಟ್ಟದಲ್ಲಿ ಸಿಇಟಿ ಪರೀಕ್ಷೆಯನ್ನು ಜಾರಿಗೆ ತಂದು ಬಡ ಮಕ್ಕಳೂ ಇಂಜಿನಿಯರ್, ಡಾಕ್ಟರ್‌ಗಳಾಗುವಂತೆ ಮಾಡಿದರು. ಆದರೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ತಂದು ಬಡವರಿಗೆ ಅನ್ಯಾಯ ಮಾಡಿದೆ. ಇದರ ಬಗ್ಗೆ ಯಾಕೆ ಶ್ರೀಗಳು ಪ್ರಶ್ನಿಸುವುದಿಲ್ಲ? ಸಣ್ಣ ಸಣ್ಣ ವಿಚಾರಕ್ಕೆ ಪ್ರತಿಭಟಿಸುವ ಬಿಜೆಪಿ ವಿದ್ಯಾರ್ಥಿ ಸಂಘಟನೆಗಳು ನೀಟ್ ಹಗರಣದ ಬಗ್ಗೆ ಯಾಕೆ ಇಲ್ಲಿಯ ತನಕ ಪ್ರತಿಭಟಿಸಿಲ್ಲ ಎಂದು ಪ್ರಶ್ನಿಸಿದರು.
ಬಿಜೆಪಿಗೆ ಹಿಂದುತ್ವದ ಗುತ್ತಿಗೆ ಕೊಟ್ಟ ಹಾಗೆ ಮಾತನಾಡುತ್ತಿದ್ದಾರೆ. ಯಾರು ಇದನ್ನು ವಿರೋಧಿಸುತ್ತಾರೆ, ಅವರನ್ನು ಧಮನಿಸುವ ಕೆಲಸ ಮಾಡುತ್ತಾರೆ. ಕಳೆದ 10 ವರ್ಷದಲ್ಲಿ ಬಿಜೆಪಿ ವಿರೋಧ ಪಕ್ಷವನ್ನು ಧಮನಿಸುವ ಕೆಲಸವನ್ನು ಮಾಡಿದೆ. ಅದನ್ನು ಅರಿತ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಪ್ರತಿಭಟನೆ ಮಾಡುವ ಬಿಜೆಪಿ ಸರ್ಕಾರ 2013ರಲ್ಲಿ ಕ್ರೂಡ್ ಆಯಿಲ್‌ಗೆ 142 ಡಾಲರ್ ಇದ್ದರೂ ಆಗ ಪ್ರಧಾನಿಗಳಾದ ಡಾ. ಮನಮೋಹನ್‌ಸಿಂಗ್ ಅವರು 62 ರೂ.ಗೆ ಪ್ರೆಟ್ರೋಲ್-ಡೀಸೆಲ್ ನೀಡಿದ್ದಾರೆ. 2013 ರ ನಂತರ ಮೋದಿ ಸರ್ಕಾರ ಬಂದಿದ್ದು, ಕೋವಿಡ್ ಸಂದರ್ಭದಲ್ಲಿ 1 ಬ್ಯಾರಲ್ ಕ್ರೂಡ್ ಆಯಿಲ್‌ಗೆ 23 ಡಾಲರ್ ಇತ್ತು. ಈಗಲೂ 80-82 ಡಾಲರ್ ಇದೆ ಆದರೂ ಒಂದು ದಿನವಾದರೂ 60-62 ರೂ.ಗೆ ಪೆಟ್ರೋಲ್-ಡೀಸೆಲ್ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಅಣ್ಣ ೩.೫ ಎಕ್ಕರೆ ಜಾಗವನ್ನು ನೀಡಿದ್ದು, ಅದನ್ನು ಮೂಡಾದವರು ನಿವೇಶ ನಿರ್ಮಾಣ ಮಾಡಲು ಪಡೆದಿದ್ದು, ಅದಕ್ಕೆ ಇವರು ಹಣವನ್ನು ಪಡೆದಿಲ್ಲ. ಆದುದರಿಂದ ಅವರಿಗೆ ಬೇರೆ ನಿವೇಶನ ನೀಡಿದ್ದಾರೆ ಎಂದು ಪದ್ಮರಾಜ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು