5:31 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್

08/11/2021, 19:11

ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೌನ ಕ್ರಾಂತಿ ಗ್ರಾಮೀಣ ಮಟ್ಟದಿಂದಲೇ ಆರಂಭವಾಗ ಬೇಕಾದುದು ಇಂದಿನ ಆಗತ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದರು.

ಅವರು ನೀರೆ ಕಣಂಜಾರು ಗ್ರಾಮೀಣ ಕೃಷಿ ಘಟಕ ಅಧ್ಯಕ್ಷ ಅಂತೋಣಿ ಡಿ’ಸೋಜರವರ ಉಸ್ತುವಾರಿಯಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಗ್ರಾಮ ಸಮಿತಿ ಕಾರ್ಯಕರ್ತರ ವಿಶೇಷ ಸಮಾವೇಶದಲ್ಲಿ ಮಾತಾಡಿದರು.

ಡಿಸಿಸಿ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ,ಆಡಳಿತಾರೂಢ ಬಿಜೆಪಿಯ ವ್ಯರ್ಥ ಆಮಿಷಗಳಿಗೆ ಬಲಿಯಾಗದೆ ಈ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ ಮರು ಹುಟ್ಟಿನ ಹಬ್ಬವನ್ನು ಆಚರಿಸುವಂತಾಗಬೇಕು ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತಾಡಿ ಪಕ್ಷ ಸಂಘಟನೆಗೆ ಕರೆ ನೀಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ,  ವಾರ್ಡ್ ಸಮಿತಿ ಅಧ್ಯಕ್ಷ ಅಂಬ್ರೋಜ್ ಲೋಬೋ ಸಂದರ್ಭೋಚಿತವಾಗಿ ಮಾತಾಡಿದರು

ಕೆಪಿಸಿಸಿ ಕೃಷಿ ಸಮಿತಿಯ ರಾಜ್ಯ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಹಿರಿಯ ಕಾಂಗ್ರೆಸ್ ಮುಂದಾಳು ಎರ್ಲಪಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ ಭೋಜ ಶೆಟ್ಟಿ, ಧರ್ಮರಾಜ ಕುಮಾರ್, ಎಪಿಎಂಸಿ ಸದಸ್ಯ ಜಯರಾಮ ಆಚಾರ್ಯ, ಸ್ಥಳೀಯ  ಗ್ರಾಮ ಸಮಿತಿ ಅಧ್ಯಕ್ಷ ಕಿಶೋರ್ ಮಡಿವಾಳ, ನೀರೆ ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಆಚಾರ್ಯ,ಬ್ಲಾಕ್ ಕೃಷಿ ಸಮಿತಿ ಉಪಾಧ್ಯಕ್ಷ ಆಂತೋನಿ ಮಚಾದೋ, ಕಾರ್ಕಳ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ಸತೀಶ್ ದೇವಾಡಿಗ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಯುವ ನಾಯಕ ಪ್ರಕಾಶ್ ಮಾರ್ಟಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಿಸಾನ್ ಘಟಕದ ಕಾರ್ಯದರ್ಶಿ  ಸುಜಾತ ಶೆಟ್ಟಿ ವಂದಿಸಿದರು.

              

  ‌‌ ‌‌‌‌‌‌‌‌‌‌‌    

  ‌‌

ಇತ್ತೀಚಿನ ಸುದ್ದಿ

ಜಾಹೀರಾತು