10:11 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್

08/11/2021, 19:11

ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೌನ ಕ್ರಾಂತಿ ಗ್ರಾಮೀಣ ಮಟ್ಟದಿಂದಲೇ ಆರಂಭವಾಗ ಬೇಕಾದುದು ಇಂದಿನ ಆಗತ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದರು.

ಅವರು ನೀರೆ ಕಣಂಜಾರು ಗ್ರಾಮೀಣ ಕೃಷಿ ಘಟಕ ಅಧ್ಯಕ್ಷ ಅಂತೋಣಿ ಡಿ’ಸೋಜರವರ ಉಸ್ತುವಾರಿಯಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಗ್ರಾಮ ಸಮಿತಿ ಕಾರ್ಯಕರ್ತರ ವಿಶೇಷ ಸಮಾವೇಶದಲ್ಲಿ ಮಾತಾಡಿದರು.

ಡಿಸಿಸಿ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ,ಆಡಳಿತಾರೂಢ ಬಿಜೆಪಿಯ ವ್ಯರ್ಥ ಆಮಿಷಗಳಿಗೆ ಬಲಿಯಾಗದೆ ಈ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ ಮರು ಹುಟ್ಟಿನ ಹಬ್ಬವನ್ನು ಆಚರಿಸುವಂತಾಗಬೇಕು ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತಾಡಿ ಪಕ್ಷ ಸಂಘಟನೆಗೆ ಕರೆ ನೀಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ,  ವಾರ್ಡ್ ಸಮಿತಿ ಅಧ್ಯಕ್ಷ ಅಂಬ್ರೋಜ್ ಲೋಬೋ ಸಂದರ್ಭೋಚಿತವಾಗಿ ಮಾತಾಡಿದರು

ಕೆಪಿಸಿಸಿ ಕೃಷಿ ಸಮಿತಿಯ ರಾಜ್ಯ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಹಿರಿಯ ಕಾಂಗ್ರೆಸ್ ಮುಂದಾಳು ಎರ್ಲಪಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ ಭೋಜ ಶೆಟ್ಟಿ, ಧರ್ಮರಾಜ ಕುಮಾರ್, ಎಪಿಎಂಸಿ ಸದಸ್ಯ ಜಯರಾಮ ಆಚಾರ್ಯ, ಸ್ಥಳೀಯ  ಗ್ರಾಮ ಸಮಿತಿ ಅಧ್ಯಕ್ಷ ಕಿಶೋರ್ ಮಡಿವಾಳ, ನೀರೆ ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಆಚಾರ್ಯ,ಬ್ಲಾಕ್ ಕೃಷಿ ಸಮಿತಿ ಉಪಾಧ್ಯಕ್ಷ ಆಂತೋನಿ ಮಚಾದೋ, ಕಾರ್ಕಳ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ಸತೀಶ್ ದೇವಾಡಿಗ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಯುವ ನಾಯಕ ಪ್ರಕಾಶ್ ಮಾರ್ಟಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಿಸಾನ್ ಘಟಕದ ಕಾರ್ಯದರ್ಶಿ  ಸುಜಾತ ಶೆಟ್ಟಿ ವಂದಿಸಿದರು.

              

  ‌‌ ‌‌‌‌‌‌‌‌‌‌‌    

  ‌‌

ಇತ್ತೀಚಿನ ಸುದ್ದಿ

ಜಾಹೀರಾತು