1:26 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ: ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

11/08/2022, 21:14

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

ಈ 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಅಚ್ಚರಿಗಳು ನಿಮಗಾಗಿ…

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ ಹಿಡಿದು ಉಪಗ್ರಹದವರೆಗೆ ಭಾರತದ ಸಾಧನೆಗಳ ಹೆಗ್ಗುರುತುಗಳನ್ನು ಯಥಾಮತಿ,ಯಥಾಸಾಮರ್ಥ್ಯಾ ಸ್ಮರಿಸುವ ಮೂಲಕ ತಾಯಿ ಭಾರತಿಯ ಅಮೃತಪುತ್ರರಾದ ಭಾರತೀಯರಲ್ಲಿ ದೇಶಾಭಿಮಾನದ ಸ್ಫೂರ್ತಿಯ ನಂದಾದೀವಿಗೆಯನ್ನು ಬೆಳಗುವಂತೆ ಮಾಡುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ.

‘ಭಾರತೀಯ ಕ್ಷಾತ್ರ ಪರಂಪರೆಯ ಮತ್ತು ಸ್ವರಾಜ್ಯ’ ವಿಷಯಗಳೂ ಸೇರಿದಂತೆ ಹಲವು ಸಂವಾದಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಸಪ್ರಶ್ನೆ, ಏಕಪಾತ್ರಾಭಿನಯ, ‘ಈಸೂರು ದಂಗೆ’ ರಂಗನಾಟಕ ವಾಚನ, ‘ಹಲಗಲಿಯ ಬೇಡರು’ ಐತಿಹಾಸಿಕ ನಾಟಕ, ಚರ್ಚೆ, ಉಪನ್ಯಾಸ, ಸೋಬಾನೆ ಪದ, ಭಜನೆ, ದೇಶಭಕ್ತಿ ಗೀತೆಗಳು, ಜಾನಪದ ಗೀತೆಗಳು, ಹಾಸ್ಯ ಗೀತೆಗಳು, ನಾಟಕ, ತಾನಾಜಿ ವಂಶಸ್ಥರಿಂದಲೇ ಛತ್ರಪತಿ ಶಿವಾಜಿ ಮಹಾರಾಜರ ಜೀವನಗಾಥೆ ಕೇಳುವ ಅವಕಾಶ… ಏನುಂಟು, ಏನಿಲ್ಲ!!

ಇವಿಷ್ಟೇ ಅಲ್ಲದೆ, ಭಾರತೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ ಅನಿವಾಸಿ ಭಾರತೀಯರು ಪಾಲ್ಗೊಂಡು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು