11:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯಅಮೃತ ಮಹೋತ್ಸವ: 9 ಕೇಂದ್ರ ಕಾರಾಗೃಹದಿಂದ 81 ಕೈದಿಗಳ ಬಿಡುಗಡೆ

16/08/2022, 18:19

ಬೆಂಗಳೂರು(reporterkarnataka.com): ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಳಿಕ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಲಾಗುತ್ತದೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು 14, ಬೆಳಗಾವಿ 3, ಬಳ್ಳಾರಿ 8, ವಿಜಯಪುರ ಇಬ್ಬರು ಮಹಿಳೆಯರು ಸೇರಿ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ 9, ಶಿವಮೊಗ್ಗ ಮಹಿಳಾ ಕಾರಾಗೃಹ ಒಬ್ಬ ಮಹಿಳೆ ಒಟ್ಟು 81 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ.

75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಅಂಗವಾಗಿ ರಾಜ್ಯಪಾಲರ ಸೂಚನೆ ಮೇರೆಗೆ ವಿಶೇಷ ಆದ್ಯತೆ ಮೇರೆಗೆ ಅಲ್ಫಾವಧಿ (8-10 ವರ್ಷ) ಶಿಕ್ಷೆಗೊಳಗಾಗಿರುವ ಕೈದಿಗಳಲ್ಲಿ ಸನ್ನಡೆ ಹೊಂದಿರುವ ಕೈದಿಗಳನ್ನು ಆಯ್ದು ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು