5:16 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆನ್ಲೈನ್ ಕಾರ್ಯಾಗಾರ

04/10/2021, 17:47

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಸೆಂಟ್‌ ಸಂಧ್ಯಾ ಕಾಲೇಜು, ಮಂಗಳೂರು ಹಾಗೂ ಗೋವಿಂದದಾಸ ಕಾಲೇಜು, ಸುರತ್ಕಲ್‌ನ ವಾಣಿಜ್ಯ ಸ್ನಾತಕೋತ್ತರ ವಿಭಾಗಗಳು ಭಾರತದಲ್ಲಿನ ಮ್ಯೂಚುವಲ್ ಫಂಡ್ಸ್‌ ಸಂಘ (AMFI) ದ ಸಹಯೋಗದೊಂದಿಗೆ ಕಾರ್ಯತಂತ್ರ ಯೋಜನೆಯ ಮೂಲಕ ಆರ್ಥಿಕ ಸಬಲೀಕರಣ” ಎಂಬ ವಿಷಯದ ವೆಬಿನಾರ್  ಆನ್‌ಲೈನ್ ನಲ್ಲಿ ಇತ್ತೀಚಿಗೆ ಜರುಗಿತು. 

ಬೆಸೆಂಟ್ ಸಂಧ್ಯಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ತಾರಾ ಶೆಟ್ಟಿ ಆಯೋಜಕರಾಗಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಎಎಂಎಫ್ ಐನ ಹಿರಿಯ ಸಲಹೆಗಾರ ಸೂರ್ಯಕಾಂತ್ ಶರ್ಮಾ (ಭಾರತೀಯ ಭದ್ರತಾ ಏನಿಮಯ ಮಂಡಳಿ (ಸೆಬಿ) ಯ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರು) ಭಾಗವಹಿಸಿದ್ದರು. 

ಸೂರ್ಯ ಕಾಂತ  ಶರ್ಮಾ ಪ್ರಾರಂಭದಲ್ಲಿ ವ್ಯಕ್ತಿಗತ ಆರ್ಥಿಕ ಭದ್ರತೆಯ ಬಗ್ಗೆ ವಿವರಿಸಿದರು. ಹೂಡಿಕೆದಾರರು ಸಂಪತ್ತನ್ನು ಕ್ರೋಢೀಕರಿಸುವ ಮೊದಲು ಯೋಚಿಸಿ, ಅರ್ಥಮಾಡಿಕೊಂಡು ಸಾಧ್ಯವಾದಷ್ಟು ಜೀವವಿಮೆಯಲ್ಲಿ ಹಾಗೂ ಸಾಧಾರಣವಾಗಿ ವೈದ್ಯಕೀಯ ವಿಮೆಯಲ್ಲಿ ಹಾಗೂ ತುರ್ತು ಪರಿಸ್ಥಿತಿಗೆಂದು ಉಳಿತಾಯ ಮಾಡಿಕೊಂಡು ನಂತರ ಹೂಡಿಕೆ ಮಾಡಿದರೆ ಉತ್ತಮ ಎಂದು ಹೇಳಿದರು.

ಹೂಡಿಕೆದಾರರು ಉಳಿತಾಯವನ್ನು ಪ್ರತಿ ವರ್ಷ ಶೇಕಡಾ 10ರಷ್ಟು ಹೆಚ್ಚಿಸಬೇಕಾಗುತ್ತದೆ. ಹೂಡಿಕೆದಾರರು ಸಂಪತ್ತನ್ನು ಕೂಡಿಡುವವರಾಗದೇ ಸಂಪತ್ತಿನ ಸೃಷ್ಟಿಕರ್ತನಾಗಬೇಕು ಎಂದು ತಿಳಿಸಿದರು. ವಿವಿಧ ಹೂಡಿಕೆಗಳ ಮೇಲಿನ ಪ್ರತಿಫಲಗಳು, ಪಿ.ಪಿ.ಎಫ್ (PPP), ಎನ್.ಪಿ.ಎಸ್ (NPS) ಸುಕನ್ಯ ಸಮೃದ್ಧಿ ಯೋಜನೆ, ಭದ್ರತಾ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸವಿವರವಾಗಿ ವಿವರಿಸಿ,  ಇವುಗಳು ಮಧ್ಯಮ ವರ್ಗದ ಹಾಗೂ ಮಾಸಿಕ ಸಂಬಳ ಪಡೆಯುವ ಜನಸಾಮಾನ್ಯರಿಗೆ ಉತ್ತಮವಾದ ಉಳಿತಾಯ ಯೋಜನೆಗಳು ಎಂದು ಹೇಳಿದರು.

ಈ ಆನ್‌ಲೈನ್‌ ವೆಬಿನಾರ್‌ನಲ್ಲಿ ಭಾರತದಾದ್ಯಂತ 348 ಜನರು ಸಕ್ರಿಯವಾಗಿ ಭಾಗವಹಿಸಿದ್ದರು.

ಬೆಸೆಂಟ್‌ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮೀನಾರಾಯಣ ಭಟ್ ಎ,  ಸ್ವಾಗತಿಸಿ,  ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಾತ್ವಿಕಾ ಶೆಟ್ಟಿ  ನಿರೂಪಿಸಿದರು. 

ಗೋವಿಂದದಾಸ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಜನ್ ಆಚಾರ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು