2:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆನ್ಲೈನ್ ಕಾರ್ಯಾಗಾರ

04/10/2021, 17:47

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಸೆಂಟ್‌ ಸಂಧ್ಯಾ ಕಾಲೇಜು, ಮಂಗಳೂರು ಹಾಗೂ ಗೋವಿಂದದಾಸ ಕಾಲೇಜು, ಸುರತ್ಕಲ್‌ನ ವಾಣಿಜ್ಯ ಸ್ನಾತಕೋತ್ತರ ವಿಭಾಗಗಳು ಭಾರತದಲ್ಲಿನ ಮ್ಯೂಚುವಲ್ ಫಂಡ್ಸ್‌ ಸಂಘ (AMFI) ದ ಸಹಯೋಗದೊಂದಿಗೆ ಕಾರ್ಯತಂತ್ರ ಯೋಜನೆಯ ಮೂಲಕ ಆರ್ಥಿಕ ಸಬಲೀಕರಣ” ಎಂಬ ವಿಷಯದ ವೆಬಿನಾರ್  ಆನ್‌ಲೈನ್ ನಲ್ಲಿ ಇತ್ತೀಚಿಗೆ ಜರುಗಿತು. 

ಬೆಸೆಂಟ್ ಸಂಧ್ಯಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ತಾರಾ ಶೆಟ್ಟಿ ಆಯೋಜಕರಾಗಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಎಎಂಎಫ್ ಐನ ಹಿರಿಯ ಸಲಹೆಗಾರ ಸೂರ್ಯಕಾಂತ್ ಶರ್ಮಾ (ಭಾರತೀಯ ಭದ್ರತಾ ಏನಿಮಯ ಮಂಡಳಿ (ಸೆಬಿ) ಯ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರು) ಭಾಗವಹಿಸಿದ್ದರು. 

ಸೂರ್ಯ ಕಾಂತ  ಶರ್ಮಾ ಪ್ರಾರಂಭದಲ್ಲಿ ವ್ಯಕ್ತಿಗತ ಆರ್ಥಿಕ ಭದ್ರತೆಯ ಬಗ್ಗೆ ವಿವರಿಸಿದರು. ಹೂಡಿಕೆದಾರರು ಸಂಪತ್ತನ್ನು ಕ್ರೋಢೀಕರಿಸುವ ಮೊದಲು ಯೋಚಿಸಿ, ಅರ್ಥಮಾಡಿಕೊಂಡು ಸಾಧ್ಯವಾದಷ್ಟು ಜೀವವಿಮೆಯಲ್ಲಿ ಹಾಗೂ ಸಾಧಾರಣವಾಗಿ ವೈದ್ಯಕೀಯ ವಿಮೆಯಲ್ಲಿ ಹಾಗೂ ತುರ್ತು ಪರಿಸ್ಥಿತಿಗೆಂದು ಉಳಿತಾಯ ಮಾಡಿಕೊಂಡು ನಂತರ ಹೂಡಿಕೆ ಮಾಡಿದರೆ ಉತ್ತಮ ಎಂದು ಹೇಳಿದರು.

ಹೂಡಿಕೆದಾರರು ಉಳಿತಾಯವನ್ನು ಪ್ರತಿ ವರ್ಷ ಶೇಕಡಾ 10ರಷ್ಟು ಹೆಚ್ಚಿಸಬೇಕಾಗುತ್ತದೆ. ಹೂಡಿಕೆದಾರರು ಸಂಪತ್ತನ್ನು ಕೂಡಿಡುವವರಾಗದೇ ಸಂಪತ್ತಿನ ಸೃಷ್ಟಿಕರ್ತನಾಗಬೇಕು ಎಂದು ತಿಳಿಸಿದರು. ವಿವಿಧ ಹೂಡಿಕೆಗಳ ಮೇಲಿನ ಪ್ರತಿಫಲಗಳು, ಪಿ.ಪಿ.ಎಫ್ (PPP), ಎನ್.ಪಿ.ಎಸ್ (NPS) ಸುಕನ್ಯ ಸಮೃದ್ಧಿ ಯೋಜನೆ, ಭದ್ರತಾ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸವಿವರವಾಗಿ ವಿವರಿಸಿ,  ಇವುಗಳು ಮಧ್ಯಮ ವರ್ಗದ ಹಾಗೂ ಮಾಸಿಕ ಸಂಬಳ ಪಡೆಯುವ ಜನಸಾಮಾನ್ಯರಿಗೆ ಉತ್ತಮವಾದ ಉಳಿತಾಯ ಯೋಜನೆಗಳು ಎಂದು ಹೇಳಿದರು.

ಈ ಆನ್‌ಲೈನ್‌ ವೆಬಿನಾರ್‌ನಲ್ಲಿ ಭಾರತದಾದ್ಯಂತ 348 ಜನರು ಸಕ್ರಿಯವಾಗಿ ಭಾಗವಹಿಸಿದ್ದರು.

ಬೆಸೆಂಟ್‌ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮೀನಾರಾಯಣ ಭಟ್ ಎ,  ಸ್ವಾಗತಿಸಿ,  ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಾತ್ವಿಕಾ ಶೆಟ್ಟಿ  ನಿರೂಪಿಸಿದರು. 

ಗೋವಿಂದದಾಸ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಜನ್ ಆಚಾರ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು