9:39 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಂಗಳೂರು ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಶುಭಾಶಯ

14/08/2022, 20:23

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಭಾರತದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಶುಭಾಶಯ ಕೋರಿದ್ದಾರೆ.

ನಾವು ಭಾರತೀಯರು ಸ್ವತಂತ್ರ ದೇಶದಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ನಮ್ಮವರು ಹೋರಾಡಿ, ಜೀವದ ಬಲಿದಾನವನ್ನು ಅರ್ಪಿಸಿ ಪಡೆದ ಸ್ವಾತಂತ್ರ್ಯವಿದು. ಅವರ ತ್ಯಾಗ ಹಾಗೂ ಬಲಿದಾನದ ಫಲವನ್ನು ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನನ್ನ ದೇಶದ ಸ್ವಾತಂತ್ರ್ಯ ಹೋರಾಟಗಾರರೆಲ್ಲರಿಗೆ ನನ್ನ ನಮನಗಳು ಹಾಗೂ ಅವರೆಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ.

ನಮ್ಮ ದೇಶ ಸ್ವತಂತ್ರ ದೇಶವಾಗಿ 75 ವರ್ಷಗಳು ಕಳೆದರೂ ಇನ್ನೂ ಕೆಲವೊಂದು ಹಿನ್ನಡೆಗಳನ್ನು ಮೆಟ್ಟಿ ನಿಂತು ನಾವು ಮುನ್ನಡೆಯಬೇಕಾಗಿದೆ. ಬಡತನದ ಸಮಸ್ಯೆ ಇನ್ನೂ ನಮ್ಮನ್ನು ಶಾಶ್ವತವಾಗಿ ಬಿಟ್ಟು ಹೋಗಿಲ್ಲ. ನಿರುದ್ಯೋಗದ ಸಮಸ್ಯೆಯು ಇನ್ನೂ ಜ್ವಲಂತವಾಗಿರುವುದು ತುಸು ಆಲೋಚಿಸಬೇಕಾದ ಸಂಗತಿಯಾಗಿದೆ. ಇಂತಹ ಪ್ರಮುಖ ಸಮಸ್ಯೆಗಳಿಂದ ಹೊರಬಂದು ನಮ್ಮ ದೇಶವು ಪ್ರಗತಿಯತ್ತ ದಾಪುಗಾಲು ಹಾಕಲೆಂದು ನಾನು ಬಯಸುತ್ತೇನೆ.

ಶಿಕ್ಷಣ ರಂಗದಲ್ಲಿ ಮಹತ್ವದ ಕ್ರಾಂತಿಯಾದರೂ ಇನ್ನೂ ಗಣನೀಯ ಅಭಿವೃದ್ಧಿಯಾಗಬೇಕಾಗಿದೆ. ಇದರೊಂದಿಗೆ ಮನುಷ್ಯತ್ವದ ಮನೋಧರ್ಮವು ಇನ್ನಷ್ಟು ಪ್ರಭಾವಶಾಲಿಯಾಗಬೇಕಾಗಿದೆ. ಈ ದೇಶದ ರಾಷ್ಟ್ರಧ್ವಜವು ಮುಗಿಲೆತ್ತರಕ್ಕೆ ಹಾರುವಾಗ ನಮ್ಮ ಈ ದೇಶದ ವಿವಿಧತೆಯಲ್ಲಿ ಏಕತೆ ಎಂಬಂತಹ ಸುಂದರ ನಿಲುವಿಗೆ ಇನ್ನೂ ಆನೆ ಬಲ ಬರದೇ ಇರುವುದು ತುಸು ಬೇಸರವನ್ನು ತರಿಸುತ್ತದೆ. ಧರ್ಮದ ಹೆಸರಿನಲ್ಲಿ ಆಗುವಂತಹ ಘರ್ಷಣೆ ಹಾಗೂ ತಾರತಮ್ಯ ಖಂಡಿತವಾಗಿಯೂ ನಿಲ್ಲಬೇಕಾಗಿದೆ. ಅದರ ಬದಲು ಬಂಧುತ್ವವನ್ನು ಬೆಳೆಸಲು ನಾವೆಲ್ಲರೂ ನಿರಂತರ ದುಡಿಯಬೇಕಾಗಿದೆ.

ಪ್ರತಿಯೊಬ್ಬರ ಅನನ್ಯ ಕೊಡುಗೆ ಇದ್ದಾಗ ಮಾತ್ರ ನಾವು ನಮ್ಮ ದೇಶದ ಸ್ವಾತಂತ್ರ್ಯದ ಶತಮಾನೋತ್ಸವದತ್ತ ಮುಖ ಮಾಡಬಹುದು. ಮುಂದಿನ 25 ವರ್ಷಗಳಲ್ಲಿ ನವೀನತೆಯ ಮೆಟ್ಟಿಲುಗಳನ್ನು ಏರಬಹುದು ಎನ್ನುವ ಆಶಯ ಪ್ರತಿಯೊಬ್ಬ ಭಾರತೀಯ ಪ್ರಜೆಯದಾಗಬೇಕಾಗಿದೆ.

ಮತ್ತೊಮ್ಮೆ ತಮಗೆಲ್ಲರಿಗೂ ಈ ಶುಭ ಸಂದರ್ಭವು ಸಂತೋಷ ತಂದು ಕೊಡಲಿ ಎಂದು ಹಾರೈಸುತ್ತೇನೆ. ಎಲ್ಲೆಲ್ಲೂ ಶಾಂತಿ, ನೆಮ್ಮದಿ, ದೇಶಪ್ರೇಮದ ವಾತಾವರಣ ನೆಲೆಸಲಿ. ಕೈ ಕೈ ಜೋಡಿಸಿ ನವಭಾರತವನ್ನು ಮತ್ತಷ್ಟು ಭದ್ರಗೊಳಿಸುವ ನಮ್ಮ ಕನಸಿಗೆ ಬಲ ಸಿಗಲಿ ಎಂಬುದು ನನ್ನ ಪ್ರಾರ್ಥನೆಯಾಗಿದೆ.

ಮಗದೊಮ್ಮೆ ನಿಮಗೆ ಸ್ವಾತಂತ್ರ್ಯದ ಅಮೃತ ಘಳಿಗೆಯ ಶುಭಾಶಯಗಳು. ಪ್ರತಿಯೊಬ್ಬರನ್ನೂ ಭಾರತಾಂಬೆ ಅಪ್ಪಿಕೊಳ್ಳಲಿ. ನಿಮ್ಮೆಲ್ಲರ ಮೇಲೆ ದೇವರ ಆಶೀರ್ವಾದಗಳನ್ನು ಬೇಡುತ್ತೇನೆ.

ಜೈ ಹಿಂದ್.

ಇತ್ತೀಚಿನ ಸುದ್ದಿ

ಜಾಹೀರಾತು