7:11 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್

14/02/2022, 21:55

ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹತ್ತಾರು ಮುಲ್ಲಾಗಳು/ಮೌಲ್ವಿಗಳು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗ ಇತಿಹಾಸಕ್ಕೆ ಬರೋಣಾ. ಈಗೇನಾದರೂ ಸಾವರ್ಕರ್ ಬದುಕಿದ್ದರೆ ಮೈಸೂರು ರೈಲಿಗೆ ಟಿಪ್ಪು ಎಕ್ಸ್ ಪ್ರೆಸ್ ಎಂದು ಹೆಸರು ಇಡಬೇಕೆಂದು ನನ್ನಂತೆ ಅವರೂ ಪ್ರತಿಪಾದಿಸುತ್ತಿದ್ದರು. ಈ ದೇಶಕ್ಕೆ ಬ್ರಿಟೀಷರಿಂದ ಅಪಾಯ ಇದೆ ಎಂಬುದನ್ನು ಮೊದಲು ಅರಿತವರೇ ಹೈದರಾಲಿ ಮತ್ತು ಟಿಪ್ಪು” ಎಂದು ಸಾವರ್ಕರ್ ಹೇಳುತ್ತಾರೆ. (ಪುಸ್ತಕ : ದಿ ಇಂಡಿಯನ್ ವಾರ್ ಆಫ್ ಇಂಡಿಪೆಂಡೆನ್ಸ್ 1857 ಲೇಖಕರು : ಸಾವರ್ಕರ್) ಅದೇ ಪುಸ್ತಕದಲ್ಲಿ ಸಾವರ್ಕಲ್ ಮುಲ್ಲಾಗಳ ಬಗ್ಗೆಯೂ ಬರೆಯುತ್ತಾರೆ. “ಮುಲ್ಲಾಗಳು ಬೋಧಿಸಿದ, ಬ್ರಾಹ್ಮಣರು ಆಶೀರ್ವಾದಿಸಿದ ದೆಹಲಿಯ ಮಸೀದಿಗಳು ಮತ್ತು ಬನಾರಸ್ ದೇವಸ್ಥಾನಗಳಿಂದ ಪ್ರಾರ್ಥನೆ ಮತ್ತು ತತ್ವಗಳು ಯಾವುದು ? ಅದೇ ಸ್ವಧರ್ಮ ಮತ್ತು ಸ್ವರಾಜ್” ಎಂದು ಬರೆಯುತ್ತಾರೆ.

ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಸಾವರ್ಕರ್ ಅವರನ್ನು ಒಪ್ಪುತ್ತಾರೋ ಇಲ್ಲವೋ ಹೇಳಲಿ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು