7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್

14/02/2022, 21:55

ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹತ್ತಾರು ಮುಲ್ಲಾಗಳು/ಮೌಲ್ವಿಗಳು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗ ಇತಿಹಾಸಕ್ಕೆ ಬರೋಣಾ. ಈಗೇನಾದರೂ ಸಾವರ್ಕರ್ ಬದುಕಿದ್ದರೆ ಮೈಸೂರು ರೈಲಿಗೆ ಟಿಪ್ಪು ಎಕ್ಸ್ ಪ್ರೆಸ್ ಎಂದು ಹೆಸರು ಇಡಬೇಕೆಂದು ನನ್ನಂತೆ ಅವರೂ ಪ್ರತಿಪಾದಿಸುತ್ತಿದ್ದರು. ಈ ದೇಶಕ್ಕೆ ಬ್ರಿಟೀಷರಿಂದ ಅಪಾಯ ಇದೆ ಎಂಬುದನ್ನು ಮೊದಲು ಅರಿತವರೇ ಹೈದರಾಲಿ ಮತ್ತು ಟಿಪ್ಪು” ಎಂದು ಸಾವರ್ಕರ್ ಹೇಳುತ್ತಾರೆ. (ಪುಸ್ತಕ : ದಿ ಇಂಡಿಯನ್ ವಾರ್ ಆಫ್ ಇಂಡಿಪೆಂಡೆನ್ಸ್ 1857 ಲೇಖಕರು : ಸಾವರ್ಕರ್) ಅದೇ ಪುಸ್ತಕದಲ್ಲಿ ಸಾವರ್ಕಲ್ ಮುಲ್ಲಾಗಳ ಬಗ್ಗೆಯೂ ಬರೆಯುತ್ತಾರೆ. “ಮುಲ್ಲಾಗಳು ಬೋಧಿಸಿದ, ಬ್ರಾಹ್ಮಣರು ಆಶೀರ್ವಾದಿಸಿದ ದೆಹಲಿಯ ಮಸೀದಿಗಳು ಮತ್ತು ಬನಾರಸ್ ದೇವಸ್ಥಾನಗಳಿಂದ ಪ್ರಾರ್ಥನೆ ಮತ್ತು ತತ್ವಗಳು ಯಾವುದು ? ಅದೇ ಸ್ವಧರ್ಮ ಮತ್ತು ಸ್ವರಾಜ್” ಎಂದು ಬರೆಯುತ್ತಾರೆ.

ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಸಾವರ್ಕರ್ ಅವರನ್ನು ಒಪ್ಪುತ್ತಾರೋ ಇಲ್ಲವೋ ಹೇಳಲಿ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು