2:43 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್

14/02/2022, 21:55

ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹತ್ತಾರು ಮುಲ್ಲಾಗಳು/ಮೌಲ್ವಿಗಳು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗ ಇತಿಹಾಸಕ್ಕೆ ಬರೋಣಾ. ಈಗೇನಾದರೂ ಸಾವರ್ಕರ್ ಬದುಕಿದ್ದರೆ ಮೈಸೂರು ರೈಲಿಗೆ ಟಿಪ್ಪು ಎಕ್ಸ್ ಪ್ರೆಸ್ ಎಂದು ಹೆಸರು ಇಡಬೇಕೆಂದು ನನ್ನಂತೆ ಅವರೂ ಪ್ರತಿಪಾದಿಸುತ್ತಿದ್ದರು. ಈ ದೇಶಕ್ಕೆ ಬ್ರಿಟೀಷರಿಂದ ಅಪಾಯ ಇದೆ ಎಂಬುದನ್ನು ಮೊದಲು ಅರಿತವರೇ ಹೈದರಾಲಿ ಮತ್ತು ಟಿಪ್ಪು” ಎಂದು ಸಾವರ್ಕರ್ ಹೇಳುತ್ತಾರೆ. (ಪುಸ್ತಕ : ದಿ ಇಂಡಿಯನ್ ವಾರ್ ಆಫ್ ಇಂಡಿಪೆಂಡೆನ್ಸ್ 1857 ಲೇಖಕರು : ಸಾವರ್ಕರ್) ಅದೇ ಪುಸ್ತಕದಲ್ಲಿ ಸಾವರ್ಕಲ್ ಮುಲ್ಲಾಗಳ ಬಗ್ಗೆಯೂ ಬರೆಯುತ್ತಾರೆ. “ಮುಲ್ಲಾಗಳು ಬೋಧಿಸಿದ, ಬ್ರಾಹ್ಮಣರು ಆಶೀರ್ವಾದಿಸಿದ ದೆಹಲಿಯ ಮಸೀದಿಗಳು ಮತ್ತು ಬನಾರಸ್ ದೇವಸ್ಥಾನಗಳಿಂದ ಪ್ರಾರ್ಥನೆ ಮತ್ತು ತತ್ವಗಳು ಯಾವುದು ? ಅದೇ ಸ್ವಧರ್ಮ ಮತ್ತು ಸ್ವರಾಜ್” ಎಂದು ಬರೆಯುತ್ತಾರೆ.

ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಸಾವರ್ಕರ್ ಅವರನ್ನು ಒಪ್ಪುತ್ತಾರೋ ಇಲ್ಲವೋ ಹೇಳಲಿ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು