8:13 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು