11:53 AM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು