1:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೋಮೇಶ್ವರ ಸಮೀಪದ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಘೋರ ದುರಂತ: ಮೈಸೂರು ಮೂಲದ 3 ಮಂದಿ ಯುವತಿಯರ ದಾರುಣ ಸಾವು

17/11/2024, 21:27

ಉಳ್ಳಾಲ(reporterkarnataka.com): ಸೋಮೇಶ್ವರ ಸಮೀಪದ ಖಾಸಗಿ ರೆಸಾರ್ಟ್ ವೊಂದರ ಈಜುಕೊಳದದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಸೋಮೇಶ್ವರ ಉಚ್ಚಿಲದ ಪೆರಿಬೈಲ್ ಖಾಸಗಿ ರೆಸಾರ್ಟ್ ನ ಈಜುಕೊಳದಲ್ಲಿ ಈ ದುರಂತ ನಡೆದಿದೆ. ಸಾವನ್ನಪ್ಪಿದವರನ್ನು ಮೈಸೂರು ಕುರುಬಾರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್. ಮೊಹಲ್ಲಾ ನಿವಾಸಿ ಪಾರ್ವತಿ ಎಸ್. (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನಾ ಎನ್.(21) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಿಗ್ಗೆ ಖಾಸಗಿ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2ರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿನ ಈಜುಕೊಳಕ್ಕಿಳಿದು ನೀರಾಟ ವಾಡುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ. ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನು ಕಳಚಿಟ್ಟಿದ್ದು ಐ ಪೋನ್ ಒಂದನ್ನು ಈಜು ಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟ ಆಡಲು ಇಳಿದಿದ್ದರು.
ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ಸಿಸಿಟಿವಿಯಲ್ಲಿ ದಾಖಲಾಗಿದೆ.
ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಎನ್. ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು