11:44 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು