8:46 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಆಗಿದ್ದಾಗ ಸರಕಾರಿ ಭೂಮಿ ಅಕ್ರಮ ಪರಭಾರೆ: ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಅಧಿಕಾರಿ ಬಂಧನ

25/08/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾವಿರಾರು ಎಕರೆ ಸರಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಮೇಲೆ ಕಡೂರಿನ ನಿಕಟಪೂರ್ವ ತಹಶೀಲ್ದಾರ್ ಉಮೇಶ್ ಅವರನ್ನು ಬಂಧಿಸಲಾಗಿದೆ.
ಕಡೂರು ಪೊಲೀಸರು ಉಮೇಶ್ ಅವರನ್ನು ಬೆಂಗಳೂರಿನಲ್ಲಿ ಸೆರೆ ಹಿಡಿದಿದ್ದಾರೆ. ಸಾವಿರಾರು ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಉಮೇಶ್ ಅವರ ಮೇಲಿದೆ. ಕಡೂರಿನಲ್ಲಿ ತಹಸೀಲ್ದಾರ್ ಆಗಿರುವಾಗ ಉಮೇಶ್ ಅವರು
ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದರು.
ಸುಮಾರು 3500 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.

ಕಡೂರು ಠಾಣೆಯಲ್ಲಿ ಉಮೇಶ್ ಸೇರಿ ಮೂವರ ವಿರುದ್ಧ ಕೇಸ್ ದಾಖಲಾಗಿತ್ತು.
ಇಂದು ಬೆಂಗಳೂರಿನಲ್ಲಿ ಕಡೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉಮೇಶ್ ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಈ ಕುರಿತು ತನಿಖೆಗೆ 15 ತಹಶೀಲ್ದಾರ್ ಗಳ ತಂಡ ರಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು