6:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಆಗಿದ್ದಾಗ ಸರಕಾರಿ ಭೂಮಿ ಅಕ್ರಮ ಪರಭಾರೆ: ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಅಧಿಕಾರಿ ಬಂಧನ

25/08/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾವಿರಾರು ಎಕರೆ ಸರಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಮೇಲೆ ಕಡೂರಿನ ನಿಕಟಪೂರ್ವ ತಹಶೀಲ್ದಾರ್ ಉಮೇಶ್ ಅವರನ್ನು ಬಂಧಿಸಲಾಗಿದೆ.
ಕಡೂರು ಪೊಲೀಸರು ಉಮೇಶ್ ಅವರನ್ನು ಬೆಂಗಳೂರಿನಲ್ಲಿ ಸೆರೆ ಹಿಡಿದಿದ್ದಾರೆ. ಸಾವಿರಾರು ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಉಮೇಶ್ ಅವರ ಮೇಲಿದೆ. ಕಡೂರಿನಲ್ಲಿ ತಹಸೀಲ್ದಾರ್ ಆಗಿರುವಾಗ ಉಮೇಶ್ ಅವರು
ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದರು.
ಸುಮಾರು 3500 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.

ಕಡೂರು ಠಾಣೆಯಲ್ಲಿ ಉಮೇಶ್ ಸೇರಿ ಮೂವರ ವಿರುದ್ಧ ಕೇಸ್ ದಾಖಲಾಗಿತ್ತು.
ಇಂದು ಬೆಂಗಳೂರಿನಲ್ಲಿ ಕಡೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉಮೇಶ್ ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಈ ಕುರಿತು ತನಿಖೆಗೆ 15 ತಹಶೀಲ್ದಾರ್ ಗಳ ತಂಡ ರಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು