6:56 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಗಳ ಕಾಟ:  ಜಾತಿ ಸರ್ಟಿಫಿಕೇಟಿಗೂ ನಿಲ್ಲಬೇಕಿಲ್ಲ 3 ದಿನ ಕ್ಯೂನಲ್ಲಿ !!

18/07/2021, 10:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಸೌಹಾರ್ದ ಸೌಧದಲ್ಲಿರುವ ತಹಶೀಲ್ದಾರ್ (ತಃಸಿಲ್) ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಕಾಟ ವಿಪರೀತವಾಗಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಕಾಲದಲ್ಲಿ ನಡೆಯದ ಕಾರಣ ಜನರು ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ. ಬ್ರೋಕರ್ ಗಳು ಜನರಿಂದ ವಿಪರೀತ ಹಣ ದೋಚುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ.

ಬ್ರೋಕರ್ ಗಳು ಪ್ರತಿಯೊಂದು ಕೆಲಸಕ್ಕೂ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಜನರಿಗೆ ತಮ್ಮ ದಿನದ ದುಡಿಮೆ ಬಿಟ್ಟು ದಿನಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅರ್ಜಿಗಳು ಹಾಕುವುದು ಕಷ್ಟವಾದಾಗ ಮಧ್ಯವರ್ತಿಗಳ ಮೊರೆ ಹೋಗುತ್ತಾರೆ. ಆಗ ಬ್ರೋಕರ್ ಗಳು ದುಪ್ಪಟ್ಟು ಹಣ ವಸೂಲಿ ಮಾಡಿ ರಾತ್ರಿ ಹೊತ್ತಿನಲ್ಲಿ ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತದೆ.

ಜಾತಿ ಆದಾಯ ಸರ್ಟಿಫಿಕೇಟ್ ಗಾಗಿ ಮೂರು ದಿನಗಳ ಕಾಲ ಕೆಲಸ ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾಗುತ್ತದೆ. ಯಾಕೆಂದರೆ ಸರ್ವರ್  ಸರಿ ಇಲ್ಲ ಎಂಬ ಉತ್ತರ ಕಂಪ್ಯೂಟರ್ ಆಪರೇಟರ್ ಗಳಿಂದ ಬರುತ್ತದೆ. ಇಲ್ಲಿನ ಹೊಸ ತಹಶೀಲ್ದಾರ್ ವಿಜಯಲಕ್ಷ್ಮೀ ಅವರಿಗೆ ಇಲ್ಲಿನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲ.

ಒಟ್ಟಿನಲ್ಲಿ ಸಾರ್ವಜನಿಕರ ಪರಿಸ್ಥಿತಿ  ಹೇಳತೀರದು.ಇಷ್ಟೇ ಅಲ್ಲದೆ ತಹಶೀಲ್ದಾರ್ ಕಚೇರಿಯ ಕೆಲಸಕ್ಕಾಗಿ ಸಾರ್ವಜನಿಕರು ಕೋವಿಡ್ ಮರೆತು ಒಬ್ಬರಿನ್ನೊಬ್ಬರು ಅಂಟಿಕೊಂಡು ನಿಲ್ಲುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ಸಾಲುಗಳನ್ನು ಮಾಡಿ  ಅವಕಾಶ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು