1:44 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಗಳ ಕಾಟ:  ಜಾತಿ ಸರ್ಟಿಫಿಕೇಟಿಗೂ ನಿಲ್ಲಬೇಕಿಲ್ಲ 3 ದಿನ ಕ್ಯೂನಲ್ಲಿ !!

18/07/2021, 10:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಸೌಹಾರ್ದ ಸೌಧದಲ್ಲಿರುವ ತಹಶೀಲ್ದಾರ್ (ತಃಸಿಲ್) ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಕಾಟ ವಿಪರೀತವಾಗಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಕಾಲದಲ್ಲಿ ನಡೆಯದ ಕಾರಣ ಜನರು ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ. ಬ್ರೋಕರ್ ಗಳು ಜನರಿಂದ ವಿಪರೀತ ಹಣ ದೋಚುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ.

ಬ್ರೋಕರ್ ಗಳು ಪ್ರತಿಯೊಂದು ಕೆಲಸಕ್ಕೂ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಜನರಿಗೆ ತಮ್ಮ ದಿನದ ದುಡಿಮೆ ಬಿಟ್ಟು ದಿನಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅರ್ಜಿಗಳು ಹಾಕುವುದು ಕಷ್ಟವಾದಾಗ ಮಧ್ಯವರ್ತಿಗಳ ಮೊರೆ ಹೋಗುತ್ತಾರೆ. ಆಗ ಬ್ರೋಕರ್ ಗಳು ದುಪ್ಪಟ್ಟು ಹಣ ವಸೂಲಿ ಮಾಡಿ ರಾತ್ರಿ ಹೊತ್ತಿನಲ್ಲಿ ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತದೆ.

ಜಾತಿ ಆದಾಯ ಸರ್ಟಿಫಿಕೇಟ್ ಗಾಗಿ ಮೂರು ದಿನಗಳ ಕಾಲ ಕೆಲಸ ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾಗುತ್ತದೆ. ಯಾಕೆಂದರೆ ಸರ್ವರ್  ಸರಿ ಇಲ್ಲ ಎಂಬ ಉತ್ತರ ಕಂಪ್ಯೂಟರ್ ಆಪರೇಟರ್ ಗಳಿಂದ ಬರುತ್ತದೆ. ಇಲ್ಲಿನ ಹೊಸ ತಹಶೀಲ್ದಾರ್ ವಿಜಯಲಕ್ಷ್ಮೀ ಅವರಿಗೆ ಇಲ್ಲಿನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲ.

ಒಟ್ಟಿನಲ್ಲಿ ಸಾರ್ವಜನಿಕರ ಪರಿಸ್ಥಿತಿ  ಹೇಳತೀರದು.ಇಷ್ಟೇ ಅಲ್ಲದೆ ತಹಶೀಲ್ದಾರ್ ಕಚೇರಿಯ ಕೆಲಸಕ್ಕಾಗಿ ಸಾರ್ವಜನಿಕರು ಕೋವಿಡ್ ಮರೆತು ಒಬ್ಬರಿನ್ನೊಬ್ಬರು ಅಂಟಿಕೊಂಡು ನಿಲ್ಲುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ಸಾಲುಗಳನ್ನು ಮಾಡಿ  ಅವಕಾಶ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು