11:44 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು