1:36 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು