1:21 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು