2:05 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು