2:41 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು !

07/07/2021, 11:20

ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಬೆಳಗ್ಗೆ 11 ಗಂಟೆಗೆ ನಗರದ ಮಾರಿಕಾಂಬಾ ದೇವಾಲಯದಿಂದ ಜಾಥಾ ಆರಂಭವಾಗಲಿದೆ. ನಂತರದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.

ಸಂಜೆ 4 ಗಂಟೆಗೆ ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ದಿ. ದೀಪಕ ಹೊನ್ನಾವರ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ  ಟೆಂಪೋ ಚಾಲಕರು ಮತ್ತು ಸಹಾಯಕರು ಹಾಗೂ ಆಟೋ ಚಾಲಕರಿಗೆ ಆಹಾರವಸ್ತುಗಳ ಕಿಟ್ ವಿತರಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ. ದೇಶಪಾಂಡೆ, ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಜಿಲ್ಲಾ ಯುವ

ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ ಸೇರಿದಂತೆ ಪಕ್ಷದ ಹಿರಿಕಿರಿಯ ನಾಯಕರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು