5:56 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ತಲಪಾಡಿ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿ ಆತ್ಮಹತ್ಯೆ: ಕ್ರಮ ಕೈಗೊಳ್ಳಲು ಎನ್ ಎಸ್ ಯುಐ ಆಗ್ರಹ

12/06/2022, 23:08

ಮಂಗಳೂರು(reporterkarnataka.com): ತನ್ನ ತಾಯಿಯ ಜನ್ಮದಿನದಂದು ಶುಭ ಹಾರೈಸಲು ವಾರ್ಡನ್ ಮೊಬೈಲ್ ಫೋನ್ ನೀಡಲಿಲ್ಲ ಎಂದು ಆರೋಪಿಸಿ ತಲಪಾಡಿಯ ಶಾರದಾ ವಿದ್ಯಾನಿಕೇತನಾ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ  ಬೆಂಗಳೂರು ಮೂಲದ ಪೂರ್ವಜ್ (14) ಎಂಬ ಬಾಲಕನೊಬ್ಬ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾ ಸಂಸ್ಥೆಯ ಬೇಜವಾಬ್ದಾರಿತನಕ್ಕೆ ಎನ್ ಎಸ್ ಯುಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಯಾವುದೇ ರೀತಿಯ ಸೂಕ್ತ ಕ್ರಮಗೊಳ್ಳದಿರುವುದು ಖಂಡನೀಯ ಎಂದು ಎನ್ ಎಸ್ ಯುಐ ಹೇಳಿದೆ.

ಹಾಸ್ಟೆಲ್ ನಲ್ಲಿ ನಿಯಮಾವಳಿ ಪ್ರಕಾರ ವಾರ್ಡನ್ ಮೊಬೈಲ್ ನೀಡಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾನೆ.

ತುರ್ತು ಅವಶ್ಯಕತೆಯಿರುವ ಸಂದರ್ಭದಲ್ಲಿ ವಾರ್ಡನ್ ವಿದ್ಯಾರ್ಥಿಗೆ ಪೋಷಕರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಬೇಕಿತ್ತು, ಇದರಿಂದ ಅಪ್ರಾಪ್ತ ವಯಸ್ಸಿನ ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಇದಕ್ಕೆ ವಿದ್ಯಾಸಂಸ್ಥೆಯೇ ನೇರ ಹೊಣೆಯಾಗಿದ್ದು, ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಖಾಸಗಿ ವಿದ್ಯಾಸಂಸ್ಥೆಗಳ ಕಟ್ಟುನಿಟ್ಟಾದ ನಿಯಮಗಳಿಗೆ ಬ್ರೇಕ್ ಹಾಕಬೇಕಾಗಿದೆ.

ಎನ್ ಎಸ್ ಯುಐ ಅಧ್ಯಕ್ಷ

ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣರಾದವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು