1:29 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತಲಪಾಡಿ ಚೆಕ್ ಪೋಸ್ಟ್: ಕೇರಳದಿಂದ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 7.95 ಲಕ್ಷ ರೂ. ವಶಕ್ಕೆ

01/04/2023, 23:50

ಉಳ್ಳಾಲ(reporterkarnataka.com):
ಯಾವುದೇ ದಾಖಲೆಗಳಿಲ್ಲದೆ ಕೇರಳದಿಂದ ಹಣ ಸಾಗಿಸುತ್ತಿದ್ದ ಕಾರನ್ನು ತಲಪಾಡಿ ಚೆಕ್ ಪೋಸ್ಟ್ ಬಳಿ ತಡೆದು ನಿಲ್ಲಿಸಿದ ಪೊಲೀಸರು 7.95 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು ಕಾರಿನಲ್ಲಿದ್ದ 7,095,000 ರೂ. ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.ಕಾಸರಗೋಡು ಕುಟ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ ಕಾರನ್ನು ವಿಚಾರಣೆಗೆ ನೀಡಲಾಗಿದೆ.
ಇನ್ನು ಸುರೇಶ್ ಅವರು ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿಗಳ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು