8:49 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ  ಇಂದಿನಿಂದ ಮಂಗಳೂರಿಗೆ ಪ್ರವೇಶ

03/08/2021, 08:31

ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲಿ ತೆರಳಿಬೇಕಾಗಿದೆ.

ಮಂಗಳೂರು ಪ್ರವೇಶಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಬಸ್ ಪ್ರಯಾಣಿಕರು ಮಾತ್ರವಲ್ಲದೇ ಇತರ ಯಾವುದೇ ವಾಹನದಲ್ಲಿ ತೆರಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಕೊರೊನಾ  ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ತಲಪಾಡಿ ಗಡಿಯಲ್ಲಿ ಇದುವರೆಗೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುತ್ತಿದ್ದ ಆರ್‌.ಟಿ.ಪಿ.ಸಿ.ಆರ್. ಪರೀಕ್ಷಾ ಕೇಂದ್ರವನ್ನು ಸೋಮವಾರ ತೆರವುಗೊಳಿಸಲಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯ ಮದ್ಯದಲ್ಲಿ ನಿರ್ಮಿಸಲಾಗಿದೆ.

ಇನ್ನು ಮಂಗಳೂರು ಕಡೆಯಿಂದ ತಲಪಾಡಿಗೆ ಬರುವ ಖಾಸಗಿ ಬಸ್‌ಗಳು ಟೋಲ್‌ಗೇಟ್‌ ವರೆಗೆ ಮಾತ್ರ ಬರಲು ಅವಕಾಶವಿದ್ದು, ಅಲ್ಲಿಂದ ಪ್ರಯಾಣಿಕರು ಇಳಿದು  100 ಮೀಟರ್ ದೂರ ಕಾಲ್ನಡಿಗೆಯಲ್ಲಿ ಮೇಲಿನ ಕೇರಳ ತಲಪಾಡಿಯ ಬಸ್ ತಂಗುದಾಣಕ್ಕೆ ನಡಕೊಂಡೆ ಬರಬೇಕಾಗಿದೆ. ಅಲ್ಲಿರುವ ಕಾಸರಗೋಡು ಕಡೆಗೆ ಬರುವ ಬಸ್ಸನ್ನು ಏರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು