2:06 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು