4:05 PM Monday30 - June 2025
ಬ್ರೇಕಿಂಗ್ ನ್ಯೂಸ್
ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ…

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು