10:47 AM Saturday6 - June 2026
ಬ್ರೇಕಿಂಗ್ ನ್ಯೂಸ್
ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು