11:38 AM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಪ್ರತಿಭಾನ್ವಿತ ತುಳುರಂಗ ಭೂಮಿ‌ ಕಲಾವಿದ, ಮೌನೇಶ ಆಚಾರ್ಯ ಮಾಣಿ ಇನ್ನಿಲ್ಲ

16/07/2025, 10:29

ಬಂಟ್ವಾಳ(reporterkarnataka.com):ತುಳು ರಂಗಭೂಮಿ‌ಯ ಪ್ರತಿಭಾನ್ವಿತ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಅವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಚಿನ್ನದ ಕೆಲಸ‌ ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌ ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿ ಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು