2:23 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು