4:26 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು