10:05 PM Friday10 - April 2026
ಬ್ರೇಕಿಂಗ್ ನ್ಯೂಸ್
ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ…

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು