3:37 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು