12:46 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು