7:42 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ

16/08/2021, 14:38

Reporterkarnataka.com

ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ.

ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಈ ನಡುವೆ ವಿಮಾನ ನಿಲ್ದಾಣಕ್ಕೆ ಬಂದಿರುವ ಅಮೆರಿಕಾದ ಸೇನಾಪಡೆಯ ವಿಮಾನವು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಣಾಮ ಸ್ಥಳದಲ್ಲಿ ನೆರೆದಿದ್ದ ಜನರು ಆತಂಕಕ್ಕೊಳಗಾಗಿದ್ದಾರೆ.

ನನಗಿಲ್ಲಿ ಬಹಳ ಭಯವಾಗುತ್ತಿದೆ. ಗಾಳಿಯಲ್ಲಿ ಗುಂಡುಗಳನ್ನು ಹಾರಿಸಲಾಗುತ್ತಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಈ ನಡುವೆ ಅಮೆರಿಕಾದ ಅಧಿಕಾರಿಗಳು ಮಾಹಿತಿ ನೀಡಿ, ನಮ್ಮ ರಾಷ್ಟ್ರದ ಅಧಿಕಾರಿಗಳು ವಿದೇಶಿ ಸಿಬ್ಬಂದಿ ಹಾಗೂ ಸ್ಥಳೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಸೇನಾ ವಿಮಾನವಗಳನ್ನು ಕಾಬುಲ್’ಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು